ನಿಟ್ಟಡೆ: ಇಲ್ಲಿಯ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಿಗೆ ಬಹುಮಾನ ನೀಡಲಾಯಿತು. ಬಳಿಕ ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು. ಸಂಚಾಲಕರಾದ ಗಿರೀಶ್ ಕೆ.ಎಚ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ ಮಕ್ಕಳ ದಿನಾಚರಣೆಯ ಮಹತ್ವ ತಿಳಿಸಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶ್ವೇತಾ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ. ಮೇಡಂ ಸ್ವಾಗತಿಸಿದರು. ಶಿಕ್ಷಕಿ ಪವಿತ್ರ ವಂದಿಸಿದರು.