ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ ಮಾಜಿ ಶಾಸಕ ಕೆ ವಸಂತ ಬಂಗೇರ ಮತ್ತು ಮಾಜಿ ಸಚಿವ ಗಂಗಾಧರ ಗೌಡ

0

ಬೆಳ್ತಂಗಡಿ : ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ  ಬೆಳ್ತಂಗಡಿ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಮತ್ತು ಮಾಜಿ ಸಚಿವರಾದ ಗಂಗಾಧರ ಗೌಡ ರವರು  ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಅಧ್ಯಕ್ಷರುಗಳ ಮತ್ತು ಜಿಲ್ಲಾ ಕಾಂಗ್ರೆಸ್ ವಿವಿಧ ಘಟಕದ ಪದಾಧಿಕಾರಿಗಳು ,ಕೆಪಿಸಿಸಿ ಪದಾಧಿಕಾರಿಗಳ ಸಮ್ಮುಖದಲ್ಲಿ  ಕೆಪಿಸಿಸಿ ಕಚೇರಿ ಬೆಂಗಳೂರಿನಲ್ಲಿ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ರಂಜನ್ ಗೌಡ,  ಶೈಲೇಶ್ ಕುಮಾರ್,  ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಳಾದ  ರಾಜಶೇಖರ್ ಅಜ್ರಿ,  ಕೇರಿಮಾರ್ ಬಾಲಕೃಷ್ಣ ಗೌಡ, ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು,  ಕೆಪಿಸಿಸಿ ಸದಸ್ಯರಾದ ಕೇಶವ ಬೆಳಾಲು ಮೋಹನ್ ಶೆಟ್ಟಿಗಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ. ಎ ಸಿ ಮ್ಯಾಥ್ಯೂ , ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ  ಮೋಹನ್ ಗೌಡ ಮೊದಲಾದವರು ಕಾಂಗ್ರೆಸ್ ನಾಯಕರುಗಳು ಭಾಗಿಯಾಗಿದ್ದರು.

 

 

LEAVE A REPLY

Please enter your comment!
Please enter your name here