ನಡ ಸ.ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತು ಬೀದಿನಾಟಕ

0

ನಡ : ನಡ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ‘ಬೀದಿನಾಟಕ’ ನಡೆಯಿತು.

ಸಿಆರ್ ಟಿ ಮಂಗಳೂರು, ಗ್ರಾಮ ಪಂಚಾಯತ್ ನಡ,ಹಾಗೂ ಕಲಾಕೇಂದ್ರ ಎಸ್.ಡಿ.ಎಂ.ಕಾಲೇಜು ಉಜಿರೆ ಇವರ ಸಹಭಾಗಿತ್ವದಲ್ಲಿ ಎಸ್.ಡಿ.ಎಂ.ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮ ನಡೆಸಿಕೊಟ್ಟರು.

ಹೆಣ್ಣುಮಕ್ಕಳ ಶಿಕ್ಷಣ,ಬಾಲ್ಯವಿವಾಹ, ಮಕ್ಕಳಲ್ಲಿರುವ ದುಶ್ಚಟ  ಮೊದಲಾದ ವಿಷಯಗಳನ್ನು ಕೇಂದ್ರೀಕರಿಸಿ, ಮನೋಜ್ಞ ಅಭಿನಯದ ಮೂಲಕ ಕಲಾತಂಡವು ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ನಡ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರೀನಿವಾಸ್, ಕಾರ್ಯದರ್ಶಿ ಕಿರಣ್ ಹಾಗೂ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಸುಧಾಕರ್ ಉಪಸ್ಥಿತರಿದ್ದರು.

ಉಪನ್ಯಾಸಕರ ಮೋಹನ ಗೌಡ ಕಲಾವಿದರಿಗೆ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here