ಕೊಯ್ಯೂರು: ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಯಾಂಬಿಕ ಇವರು ನ.15 ರಂದು ಮಂಗಳಾ ಕ್ರೀಡಾಂಗಣ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ವಯೋಮಾನದ ವಿಭಾಗದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರವೀಣ್ ಕುಮಾರ್ ಎಚ್ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ತಚ್ಚಮೆ ಮತ್ತು ಎಲ್ಲಾ ಶಿಕ್ಷಕರು ಸಹಕಾರ ನೀಡಿರುತ್ತಾರೆ.