ವೇಣೂರು: ಗುಂಡೂರಿ ಶ್ರೀಗುರು ಚೈತನ್ಯ ಸೇವಾಶ್ರಮಕ್ಕೆ ನ.18 ರಂದು ಭೇಟಿ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೇಣೂರು ವಲಯದ ಪ್ರತಿನಿಧಿಗಳು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊನ್ನಯ್ಯ ಕಾಟಿಪಳ್ಳ ಅವರನ್ನು ಸನ್ಮಾನಿಸಿ, ಆಶ್ರಮವಾಸಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ವಲಯ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿಗಳಾದ ಸುರೇಶ್ ಶೆಟ್ಟಿ, ಹರೀಶ್ ಪೂಜಾರಿ, ಜ್ಯೋತಿ, ಹೇಮಲತಾ, ಮೋಹಿನಿ, ಜಯಂತಿ, ರೂಪಾ ಚಂದನ, ನಳಿನಿ ಉಪಸ್ಥಿತರಿದ್ದರು. ಸೇವಾಶ್ರಮದ ವಾಸಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭ ಸೇವಾಶ್ರಮದ ಕಾಮಗಾರಿಗಳ ಅಭಿವೃದ್ಧಿಯ ಬಗ್ಗೆ ಮೇಲ್ವಿಚಾರಕಿಗೆ ಮಾಹಿತಿ ನೀಡಿ ಕೃತಜ್ಞತೆ ಸಲ್ಲಿಸಿದರು.