ಉಜಿರೆ ಯಕ್ಷಗಾನ ಬಯಲಾಟ ಆಮಂತ್ರಣ ಪತ್ರಿಕೆ ಬಿಡುಗಡೆ

0

ಉಜಿರೆ : ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ ಯಕ್ಷ ಬಳಗ ಉಜಿರೆ ಸಮಿತಿಯ ಸಹಕಾರದೊಂದಿಗೆ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ರಥ ಬೀದಿಯಲ್ಲಿ ನ.29 ರಂದು ನಡೆಯುವ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಆಮಂತ್ರಪತ್ರಿಕೆಯನ್ನು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ರವರು ಬಿಡುಗಡೆಗೊಳಿಸಿದರು .

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ರಕ್ಷಿತ್ ಶಿವರಾಂ,  ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ , ವಲಯ ಸಮಿತಿಯ ಅಧ್ಯಕ್ಷರಾದ ಶ್ರೀಧರ  ಪೂಜಾರಿ , ತಾಲೂಕು ಸಮಿತಿಯ ಕಾರ್ಯದರ್ಶಿ ನಿತ್ಯಾನಂದ ನಾವರ, ವಲಯ ಸಮಿತಿಯ ಕಾರ್ಯದರ್ಶಿ ಪ್ರವೀಣ್ ವಿ.ಜಿ,  ಕೋಶಾಧಿಕಾರಿ ಪ್ರವೀಣ್ ಉಜಿರೆ ಹಾಗೂ ವಲಯ ಸಮಿತಿಯ ಪದಾಧಿಕಾರಿಗಳು ಗೌರವ ಸಲಹೆಗಾರರು,ಸದಸ್ಯರು,ಪ್ರಮುಖರು ಉಪಸ್ಥಿತರಿದ್ದರು

 

LEAVE A REPLY

Please enter your comment!
Please enter your name here