ಬೆಳ್ತಂಗಡಿ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಶಿಕ್ಷಕರಿಗೆ ನಡೆದ ಸಹಪಠ್ಯ ಚಟುವಟಿಕೆ ಪ್ರಬಂಧ ಸ್ಪರ್ಧೆಯಲ್ಲಿ ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.