ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸದಸ್ಯ ವಿಜೇತ್ ಆಯ್ಕೆ

0

ಬೆಳ್ತಂಗಡಿ: ಭಾರತೀಯ ಸೇನೆಗೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ  ವಿಶಾಲ ಮತ್ತು ವಿರೇಶ್ ಮಡಿವಾಳ ದಂಪತಿಗ ಪುತ್ರ  ವಿಜೇತ್ ರವರು ಆಯ್ಕೆಯಾಗಿದ್ದಾರೆ.

ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಕುತ್ಲೂರು ಇದರಲ್ಲಿ ಸಕ್ರಿಯ ಸದಸ್ಯನಾಗಿದ್ದು, ಸಾಮಾಜಿಕ ಚಟುವಟಿಕೆಗಳ ಕಾರ್ಯಕ್ಕೆ ತನ್ನನು ತಾನು ತೊಡಗಿಸಿಕೊಂಡಿದ್ದರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ ಅಗ್ನಿವೀರ್ ಗೆ ಅರ್ಜಿ ಸಲ್ಲಿಸಿದ್ದ ವಿಜೇತ್ ರವರು ಹಾವೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡಿರುವುದರಿಂದ ವ್ಯಾಸಂಗವನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೇಶಸೇವೆ ಮಾಡಲು ಹೊರಟಿದ್ದಾರೆ. ಇವರಿಗೆ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪರವಾಗಿ, ಗ್ರಾಮಸ್ಥರ ಪರವಾಗಿ ಅಭಿನಂದನೆಯಲ್ಲಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here