ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಉಚಿತವಾಗಿ ಮಜ್ಜಿಗೆ, ಜ್ಯೂಸ್ ನೀಡಿದ ವೀರ ಕೇಸರಿ ಫ್ರೆಂಡ್ಸ್ (ರಿ) ಮಚ್ಚಿನ, ಸಿದ್ದಿವಿನಾಯಕ ಭಜನಾ ಮಂಡಳಿ ಕತ್ತಿನ ಹಾಗೂ ವಿಪತ್ತು ನಿರ್ವಹಣಾ ಘಟಕ ಮಚ್ಚಿನ

0

ಮಚ್ಚಿನ ವೀರ ಕೇಸರಿ ಫ್ರೆಂಡ್ಸ್ (ರಿ) ವತಿಯಿಂದ ಮಜ್ಜಿಗೆ ವ್ಯವಸ್ಥೆ

ಬಳ್ಳಮಂಜ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಮಚ್ಚಿನ ವೀರ ಕೇಸರಿ ಫ್ರೆಂಡ್ಸ್ (ರಿ) ಮಚ್ಚಿನ ಇದರ ವತಿಯಿಂದ ಮಜ್ಜಿಗೆಯ ವ್ಯವಸ್ಥೆಯನ್ನು ನೀಡಲಾಯಿತು.

ಸಂಘದ ಅಧ್ಯಕ್ಷ ಅಶೋಕ್ ನಾವುಡ ಹಾಗೂ ಸರ್ವಸದಸ್ಯರು ಶ್ರಮವಹಿಸಿದರು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡರು.

ಸಿದ್ದಿವಿನಾಯಕ ಭಜನಾ ಮಂಡಳಿ ಕುತ್ತಿನ ಹಾಗೂ ವಿಪತ್ತು ನಿರ್ವಹಣಾ ಘಟಕ ಮಚ್ಚಿನ :

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಸಿದ್ದಿವಿನಾಯಕ ಭಜನಾ ಮಂಡಳಿ ಕುತ್ತಿನ ಹಾಗೂ ವಿಪತ್ತು ನಿರ್ವಹಣಾ ಘಟಕ ಮಚ್ಚಿನ ಇವರಿಂದ ಸಾರ್ವಜನಿಕರಿಗೆ ಉಚಿತವಾಗಿ ಲಿಂಬೆ ಜ್ಯೂಸ್ ಹಾಗೂ ಬೆಲ್ಲದ ನೀರನ್ನು ಸಾರ್ವಜನಿಕರಿಗೆ ನೀಡಿದರು.

ಸಿದ್ದಿವಿನಾಯಕ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಕುಲಾಲ್ ಮತ್ತು ಸರ್ವಸದಸ್ಯರು ಹಾಗೂ ವಿಪತ್ತು ನಿರ್ವಹಣಾ ಘಟಕದ ಪ್ರಭಾಕರ್ ಮುಡಲಡ್ಕ ಹಾಗೂ ಸರ್ವ ಸದಸ್ಯರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here