ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಪುತ್ತೂರು, ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬೆಟ್ಟಂಪಾಡಿ ವಲಯ ಇದರ ಆಶ್ರಯದಲ್ಲಿ ಜೂ.23 ರಂದು ದೇವಸ್ಯ ಮಂಜುನಾಥ ಸಭಾಭವನದಲ್ಲಿ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಮಹಾಬಲ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು ಅರ್ಯಾಪು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಸಂತ ದುರ್ಗಾ ಅಧ್ಯಕ್ಷತೆ ವಹಿಸಲಿದ್ದಾರೆ. ಪುರುಷರ ಕಟ್ಟೆ ಪ್ರಸಾದ್ ಆಯುರ್ವೇದಿಕ್ ಹೆಲ್ತ್ ಕೇರ್ ನ ಡಾl ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ. ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ದೊಡ್ಡಡ್ಕ ಒಕ್ಕೂಟದ ಅಧ್ಯಕ್ಷೆ ಕವಿತಾ ಮತ್ತು ಕುಂಜೂರು ಪಂಜ ಒಕ್ಕೂಟದ ಅಧ್ಯಕ್ಷ ರಾಮ ನಾಯ್ಕ ಉಪಸ್ಥಿತರಿರುವರು ಎಂದು ಬೆಟ್ಟಂಪಾಡಿ ವಲಯ ಮೆಲ್ವೀಚಾರಕಿ ಕವಿತಾ ವಸಂತ್ ತಿಳಿಸಿದ್ದಾರೆ.