ಪುತ್ತೂರು:ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಅಂಗವಾಗಿ ಜ.8ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಜ.೬ರಂದು ಪ್ರತಿಷ್ಠಾ ವರ್ಧಂತಿ ಉತ್ಸವದ ಅಂಗವಾಗಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹವನ, ಕಲಶ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಕೊರೋನಾ ಮುಕ್ತಿಗಾಗಿ ಸಾರ್ವಜನಿಕ ಧನ್ವಂತರಿ ಹವನ ನಡೆಯಿತು.ಇದೇ ವೇಳೆಗೆ ರಾಮನಗರ ವಿಜಯ ಕುಮಾರಿ ಶೆಣೈ ಮತ್ತು ಬಳಗದವರಿಂದ ವಿಷ್ಣುಸಹಸ್ರನಾಮ ಮತ್ತು ದೇವರ ನಾಮ ಸ್ಮರಣೆ ಹಾಗೂ ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಜ.೭ರಂದು ಸಂಜೆ ಭಜನೆ, ರಾತ್ರಿ ಚೆಂಡೆ ಸೇವೆ, ಶ್ರೀದೇವರ ಬಲಿ ಹೊರಟು, ಉತ್ಸವ ಬಲಿ ಹಾಗೂ ಕಟ್ಟೆಪೂಜೆ ನಡೆಯಿತು.
ಜ.೮ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ನವಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಮನ್ಮಹಾರಥೋತ್ಸವ:
ಸಂಜೆ ಚೆಂಡೆ ಸೇವೆ, ಭಜನೆ, ಶ್ರೀದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ ಹಾಗೂ ರಾತ್ರಿ ಶ್ರೀ ಮನ್ಮಹಾರಥೋತ್ಸವ ನಡೆದ ಬಳಿಕ ಹುಲಿಭೂತ, ಪಂಜುರ್ಲಿ ಹಾಗೂ ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.