ಪುತ್ತೂರು: ಶಾಂತಿಗೋಡು ಗ್ರಾಮದ ಕೈಂದಾಡಿಯ ಶಿರಾಡಿ ದೈವಸ್ಥಾನದಲ್ಲಿ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಜ.೨೮ರಂದು ನಡೆಯಲಿದೆ. ಜ.೨೫ರಂದು ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, ಜ.೨೬ರಂದು ಸಂಜೆ ಶಾಂತಿಗೋಡು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, ಜ.೨೭ರಂದು ಸಂಜೆ ಊರವರಿಂದ ಭಜನೆ, ಸರೋಳಿಯಿಂದ ಕಲ್ಕುಡ ಕಲ್ಲುರ್ಟಿ ದೈವಗಳ ಭಂಡಾರ ಬರುವುದು, ಬಳಿಕ ಶಿರಾಡಿ ದೈವದ ಭಂಡಾರ ತೆಗೆಯುವುದು, ಜ.೨೮ರಂದು ಬೆಳಿಗ್ಗೆಯಿಂದ ದೈವಗಳ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.