ಭ್ರಷ್ಟಾಚಾರದ ವಿರುದ್ಧ ಸದಾ ಸಮರ ಸಾರುತ್ತಿರುವ, ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನವಾಗಿರುವ ಸಂತೋಷ್ ಹೆಗ್ಡೆ

ಪುತ್ತೂರು: ಭ್ರಷ್ಟಾಚಾರದ ವಿರುದ್ಧ ಸಮರ ಮುಂದುವರಿಸುತ್ತಿರುವ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆಯವರು ಜನವರಿ 6ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. `ಭ್ರಷ್ಟಾಚಾರ ಮುಕ್ತ ಪುತ್ತೂರು ತಾಲೂಕು’ ನಿರ್ಮಾಣಕ್ಕಾಗಿ ಅಭಿಯಾನ ನಡೆಸುತ್ತಿರುವ ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಯ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ ಜ.6ರಂದು ಅಪರಾಹ್ನ 2.30ರಿಂದ ಸಂಜೆ 5ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಎನ್. ಸಂತೋಷ್ ಹೆಗ್ಡೆಯವರು ಭ್ರಷ್ಟಾಚಾರದ ವಿರುದ್ಧದ ಹೋರಾಟ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಇರುವ ವಿಧಾನಗಳ ಕುರಿತು ಮಾಹಿತಿ … Continue reading ಭ್ರಷ್ಟಾಚಾರದ ವಿರುದ್ಧ ಸದಾ ಸಮರ ಸಾರುತ್ತಿರುವ, ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನವಾಗಿರುವ ಸಂತೋಷ್ ಹೆಗ್ಡೆ