ಸಾಲೆತ್ತೂರು: ಮದುಮಗ ಕೊರಗಜ್ಜನನ್ನು ಹೊಲುವ ವೇಷ ಧರಿಸಿದ ವಿಚಾರ – ಮದುಮಗಳ ಮನೆಗೆ ವಿಟ್ಲ ಪ್ರಖಂಡ ಭಜರಂಗದಳ, ವಿ.ಎಚ್ ಪಿ ಕಾರ್ಯಕರ್ತರಿಂದ ಮುತ್ತಿಗೆಗೆತ್ನ

0

ವಿಟ್ಲ: ಮದುಮಗನೊಬ್ಬ ಮದುಮಗಳ ಮನೆಯಲ್ಲಿ ಕೊರಗಜ್ಜನನ್ನು ಹೋಲುವ ವೇಷಧರಿಸಿ ಕುಣಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್ ಪಿ ಕಾರ್ಯಕರ್ತರು ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿರುವ ಮಗಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರತರು ದಿಕ್ಕಾರ ಕೂಗಿದರು. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಪ್ರತಿಭಟನಾ ಕಾರರನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ‌.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸಮೀಪದ ಯುವಕನ ಜೊತೆ ನಡೆದಿತ್ತು. ವಿವಾಹ ಸಮಾರಂಭ ಮಧ್ಯಾಹ್ನ ನಡೆದಿತ್ತು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಔತಣಕೂಟಕ್ಕೆ ಆಗಮಿಸಿದ್ದರು. ರಾತ್ರಿ ವೇಳೆ  ಆಗಮಿಸಿದ ವರನ ಬಳಗದವರು ವಧುವಿನ ಮನೆ ಪಕ್ಕದ ರಸ್ತೆಯಲ್ಲಿ ವರನಿಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮೆರವಣಿಗೆಯಲ್ಲಿ ಕರೆತಂದಿದ್ದರು. ಬಳಿಕ ಮದುಮಗನಿಗೆ ಬಣ್ಣ ಹಚ್ಚಿ ಕೊರಗಜ್ಜನನ್ನು ಹೋಲುವ ವೇಶ ದರಿಸಿ ಕುಣಿಸಿದ ದೃಶ್ಯವೊಂದು  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು.

LEAVE A REPLY

Please enter your comment!
Please enter your name here