ಸುಳ್ಯ ತಾಲ್ಲೂಕು ನಿವೃತ್ತ ನೌಕರರ ಸಂಘ ವತಿಯಿಂದ ತೆಕ್ಕಿಲ್ ಶಾಲೆಗೆ ಉಚಿತ ಪುಸ್ತಕ ದೇಣಿಗೆ ನೀಡಲಾಯಿತು. ಸಂಘದ ಅಧ್ಯಕ್ಷರಾದ ಡಾ. ರಂಗಯ್ಯ ( ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ, ಕೊಡಗು ಜಿಲ್ಲೆ) ಹಾಗೂ ಉಪಾಧ್ಯಕ್ಷರಾದ ಅಬ್ದುಲ್ಲ ಮಾಸ್ತರ್(ನಿವೃತ್ತ ಉಪನ್ಯಾಸಕರು, ಎನ್ನೆಂಪಿಯಸಿ ಅರಂತೋಡು) ಮಾತನಾಡಿ ಪುಸ್ತಕ ಮತ್ತು ಓದುವಿಕೆಯ ಮಹತ್ವವನ್ನು ವಿವರಿಸಿದರು.
ತೆಕ್ಕಿಲ್ ಶಾಲೆಯ ಆಡಳಿತಾಧಿಕಾರಿ ರಹೀಂ ಬೀಜದಕಟ್ಟೆ ವರು ಸಂಘಕ್ಕೆ ಕೃತಜ್ಞತೆ ಅರ್ಪಿಸಿದರು . ಶಿಕ್ಷಕಿ ಶ್ರೀಮತಿ ಸೌಮ್ಯ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ ಕೆ ವಂದಿಸಿದರು.