ಸಾಂದೀಪ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ, ಗಣೇಶ ಚತುರ್ಥಿ ಆಚರಣೆ ಹಾಗೂ ಹುಟ್ಟು ಹಬ್ಬ ಆಚರಣೆ

0

 


ಸುಳ್ಯ ಎಂ.ಬಿ ಫೌಂಡೇಷನ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಸಾಂದೀಪ್ ವಿಶೇಷ ಚೇತನರ ಮಕ್ಕಳ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ, ಗಣೇಶ ಚತುರ್ಥಿ ಹಾಗೂ ಹುಟ್ಟು ಹಬ್ಬ ಆಚರಣೆ ಸಾಂದೀಪ್ ಶಾಲೆ ‌ಸಭಾಂಗಣದಲ್ಲಿ ಸೆ.1 ರಂದು ನಡೆಯಿತು.

ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ,ಗಣೇಶ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಗಾಂಧಿನಗರ ಕೆ.ಪಿ.ಎಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಎ.ಜಿ. ಭವಾನಿ ಉದ್ಘಾಟಿಸಿದರು.

ಎಂ.ಬಿ ಫೌಂಡೇಷನ್ ಅಧ್ಯಕ್ಷ ಎಂ.ಬಿ ಸದಾಶಿವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕ,ಸುದ್ದಿ ಬಿಡುಗಡೆ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆಯವರ ಪುತ್ರ ಹೃದಾನ್ ಹುಟ್ಟು ಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಲಾಯಿತು.

ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ಸಹಭೋಜನ ಏರ್ಪಡಿಸಿ ಮಕ್ಕಳಿಗೆ ಬಹುಮಾನ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮತಿ ಭಾರತಿ ಜಯಂತ್ ಗೌಡ ಕಾಳಂಮನೆ,ಇಳಾಶ್ರೀ ಯಶ್ವಿತ್ ಉಪಸ್ಥಿತರಿದ್ದರು.

ಸಂಸ್ಥೆಯ ಟ್ರಸ್ಟಿ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಸಂಚಾಲಕಿ ಹರಿಣಿ ಸದಾಶಿವ ವಂದಿಸಿದರು.

LEAVE A REPLY

Please enter your comment!
Please enter your name here