ಪೆರಾಜೆ ದೇವಸ್ಥಾನದಿಂದ ತಲಕಾವೇರಿಗೆ ಕದಿರು ಅರ್ಪಣೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಿಂದ ತಲತಲಾಂತರದಿಂದ ನಡೆದುಕೊಂಡು ಬಂದ ಪದ್ಧತಿಯಂತೆ, ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಶ್ರೀ ಕಾವೇರಿ ಸನ್ನಿಧಿಗೆ ಕದಿರು, ತೆಂಗಿನಕಾಯಿ, ಅಕ್ಕಿ, ಹೂ ಹಿಂಗಾರ ತೆಗೆದುಕೊಂಡು ಹೋಗಿ ಅರ್ಪಿಸಲಾಯಿತು. ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಪಕ್ಕದ ಶ್ರೀ ಕಾವೇರಿಗದ್ದೆಯಿಂದ ಕದಿರು ತೆಗೆದು ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಕಲ ಪೂಜಾ ವಿಧಿ ವಿಧಾನಗಳ ನಂತರ ಸಮರ್ಪಿಸಲಾಯಿತು.


ಈ ಸಂದರ್ಭ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ತಲಕಾವೇರಿ ದೇವಸ್ಥಾನದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಭಾಗಮಂಡಲ ಕ್ಷೇತ್ರದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ ಸೇರಿದಂತೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಇದ್ದರು.

LEAVE A REPLY

Please enter your comment!
Please enter your name here