ಪುತ್ತೂರು: ಎಲ್ಐಸಿ ಪ್ರತಿನಿಧಿಯಾಗಿದ್ದ ಕೃಷಿಕರೋರ್ವರನ್ನು ಕೊಲೆಗೈದಿರುವ ಘಟನೆ ರೆಖ್ಯ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಡೆದಿದೆ. ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು.
ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ ಈ ಕೊಲೆ ಕೃತ್ಯ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.