ಉಪ್ಪಿನಂಗಡಿ: ಹಿರೇಬಂಡಾಡಿ ಸುಬ್ರಹ್ಮಣ್ಯ ದೇವಸ್ಥಾನ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆ ಆಗುತ್ತಿರುವ ಬಗೆಗಿನ ಪತ್ರಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಗುತ್ತಿಗೆದಾರರು ಪ್ರತಿಕ್ರಿಯೆ ನೀಡುತ್ತಾ “ವಿನಾ ಕಾರಣ” ಕಾಮಗಾರಿಗೆ ತಡೆ ಒಡ್ಡಿದ್ದಾರೆ ಎಂದು ಹೇಳಿಕೆ ನೀಡಿರುವುದು ಸರಿ ಅಲ್ಲ. ಅಲ್ಲಿ ನಡೆದಿರುವ ಕಾಮಗಾರಿ ಮೇಲ್ನೋಟಕ್ಕೆ ಕಳಪೆ ಆಗಿರುವುದು ವಾಸ್ತವ ಸತ್ಯ ಎಂದು ಚೆನ್ನಕೇಶವ ಕನ್ಯಾನ ಎಂಬವರು ಸ್ಪಷ್ಟನೆ ನೀಡಿದ್ದಾರೆ.
ದೇವಸ್ಥಾನಕ್ಕೆ ಹೋಗುವ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳೆಪೆ ಆಗುವುದನ್ನು ಮನಗಂಡು ನಾನು ಸೇರಿದಂತೆ ಗ್ರಾಮಸ್ಥರು ಸೇರಿ ಕಾಮಗಾರಿಯನ್ನು ತಡೆಹಿಡಿದಿರುವುದು. ಆದ್ದರಿಂದ ಗುತ್ತಿಗೆದಾರರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳನ್ನು ಕಾಮಗಾರಿ ನಡೆಯುವ ಸ್ಥಳಕ್ಕೆ ಕರೆದುಕೊಂಡು ಬಹಿರಂಗ ಚರ್ಚೆಗೆ ಆಹ್ವಾನಿಸುತ್ತಿದ್ದೇವೆ ಎಂದು ಗ್ರಾಮಸ್ಥರಾದ ಚೆನ್ನಕೇಶವ ಕನ್ಯಾನ ನೀಡಿರುವ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.