ಸಂಪ್ಯ ಪೊಲೀಸರಿಂದ ಸಿನೀಮಿಯಾ ರೀತಿಯಲ್ಲಿ ಕಾರ್ಯಾಚರಣೆ – ಉದ್ಯಮಿಯಿಂದ ಹಣದ ಬೇಡಿಕೆಯಿಟ್ಟ ರೌಡಿ ಶೀಟರ್‍ಸ್ ಅಂದರ್ 

0

 

  • ಸಂಪ್ಯ ಎಸ್.ಐ ಉದಯರವಿ ಅವರ ನೇತೃತ್ವದ ತಂಡದ ಕಾರ್ಯಾಚರಣೆ

ಪುತ್ತೂರು: ಉದ್ಯಮಿಯೋರ್ವರಿಗೆ ವಿವಿಧ ಮೊಬೈಲ್‌ಗಳಿಂದ ಕರೆ ಮಾಡಿ ಬೆದರಿಕೆಯೊಡ್ಡಿ, ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದ ಇಬ್ಬರು ರೌಡಿ ಶೀಟರ್‌ಗಳನ್ನು ಸಂಪ್ಯ ಠಾಣಾ ಎಸೈ ಉದಯ ರವಿ ನೇತೃತ್ವದ ಪೊಲೀಸರ ತಂಡ ಸಿನೀಮಿಯಾ ರೀತಿಯಲ್ಲಿ ಕಾರ್ಯಾಚರಣೆ ಮಾಡಿ ಬಂಧಿಸಿದ ಬಗ್ಗೆ ವರದಿಯಾಗಿದೆ.


ಬಂಟ್ವಾಳ ತಾಲೂಕು ಗೋಳ್ತಮಜಲು ಕಲ್ಲಡ್ಕ ಮಸೀದಿ ಬಳಿ ನಿವಾದಿ ಅಬ್ದುಲ್ಲಾರವರ ಪುತ್ರ ಖಲಂದರ್ ಶರೀಫ್‌ಶಾಫಿ ಹಾಗೂ ಮಂಗಳೂರು ಮಂಜನಾಡಿ ಕುಚ್ಚಿಗದ್ದೆ ಹಂಝರವರ ಪುತ್ರ ಹಸನಬ್ಬಂಹಸನ್ ಅಚ್ಚು ಚುನ್ ಬಂಧಿತ ಆರೋಪಿಗಳು.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ನಿವಾಸಿ ದರ್ಬೆಯಲ್ಲಿರುವ ನಸೀಬ್ ಬೋರ್‌ವೆಲ್ ಮಾಲಕ ಅಬೂಬಕ್ಕರ್ ಮುಲಾರ್ ಅವರಿಗೆ ಕಳೆದ ಒಂದು ವಾರಗಳಿಂದ ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್ ಗಳಿಂದ ಕರೆ ಮಾಡಿ `ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು ಹಣ ಬೇಕು, ಅವನನ್ನು ಬಿಡಿಸಲು ರೂ. 13,00,000/- ತಗಲುತ್ತದೆ. ಅವನನ್ನು ಬಿಡಿಸಲು ನೀನು ಹಣ ಕೊಡಬೇಕು, ನೀನು 2 ದಿನದ ಒಳಗೆ ರೂ. 3,50,000/- ಹಣ ರೆಡಿ ಮಾಡಬೇಕು, ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ. ಈ ವಿಚಾರವನ್ನು ಇತರರಲ್ಲಿ ತಿಳಿಸಿದರೆ ನಿನ್ನ ಹೆಣ ಖಂಡಿತ ಬೀಳುತ್ತದೆ, ನೀನು ಜೀವಂತ ಬದುಕಲು ಸಾಧ್ಯವಿಲ್ಲ’ ಎಂದು ಜೀವ ಬೆದರಿಕ ಒಡ್ಡಿರುವುದಾಗಿ ಉದ್ಯಮಿ ಅಬೂಬಕ್ಕರ್ ಮುಲಾರ್ ಅವರು ಜ.೫ರಂದು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಅ.ಕ್ರ: 03/2022೨ ಕಲಂ; 504,506,507,387 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ತನಿಖೆ ನಡೆಸಲು ಮುಂದಾಗಿದ್ದ ಪೊಲೀಸರು ಜ.೧೪ರಂದು ಉದ್ಯಮಿಯಿಂದ ಹಣ ಪಡೆದುಕೊಂಡು ಹೋಗುವ ಸಮಯ ತೀವ್ರ ಕಾರ್ಯಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿ, ಉದ್ಯಮಿಯಿಂದ ವಸೂಲಿ ಮಾಡಿದ ರೂ 50,000/- ಹಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಂಡದ್ದಾರೆ.

ಸಿನೀಮಿಯಾ ರೀತಿಯಲ್ಲಿ ಕಾರ್ಯಾಚರಣೆ:
ಉದ್ಯಮಿಯಿಂದ ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ ಹಣದ ಬೇಡಿಕೆಯಿಟ್ಟ ಅಪರಿಚಿತರಿಗೆ ಉದ್ಯಮಿಯ ಮೂಲಕವೇ ಹಣದ ನೀಡುವ ಕುರಿತು ಮಾತುಕತೆ ನಡೆಸಿ ಕುರಿಯ ಸಮೀಪವೇ ಹಣ ನೀಡುವ ಸ್ಥಳ ನಿಗದಿ ಪಡಿಸಿದ್ದರು. ಹಾಗೆ ಜ.14ರಂದು ಅಪರಿಚಿತರು ಕಾರಿನಲ್ಲಿ ಬಂದು ಕುರಿಯ ಸಮೀಪ ಉದ್ಯಮಿಯಿಂದ ಹಣ ಪಡೆದು ಹೋಗುತ್ತಿದ್ದಂತೆ ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದ ತಂಡ ಆರೋಪಿಗಳನ್ನು ಸುತ್ತುವರಿದು ಬಂಧಿಸಿದ್ದಾರೆ.

ಬಂಧಿತರ ಆರೋಪಿಗಳು ರೌಡಿ ಶೀಟರ್‍ಸ್:
ಬಂಧಿತ ಆರೋಪಿಗಳ ಪೈಕಿ ಕಲಂದರ್ ಶರೀಫ್ ಶಾಫಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಹಸನಬ್ಬ ಹಸನ್ ಅಚ್ಚು ಅಚುನ್ ಈತನು ಮಂಗಳೂರು ನಗರದ ಕೋಣಾಜೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಅಲ್ಲದೆ ಕಂಕನಾಡಿ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿರುತ್ತದೆ. ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನಾವಾಣೆ ಮತ್ತು ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕಿ ಡಾ| ಗಾನ ಪಿ ಕುಮಾರ್‌ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಗೆರವರ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ಉದಯರವಿ, ಎಂ.ಪ್ಪ, ಅಮೀನ್ ಸಾಬ್ ನಡೆದ ಕಾರ್ಯಾಚರಣೆಯಲ್ಲಿ ಸಿಬಂದಿಗಳಾದ ಎಂ ಅತ್ತಾರ್, ಹಾಗೂ ಸಿಬ್ಬಂದಿಗಳಾದ ಕೃಷ್ಣಪ್ಪ, ದೇವರಾಜ್, ಆದ್ರಾಮ, ಪ್ರವೀಣ್ ರೈ, ಹರ್ಷಿತ್, ಗಾಯತ್ರಿ, ವಿನೋದ್, ರವರು ಭಾಗವಹಿಸಿರುತ್ತಾರೆ. ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್ ರವರು ಸಹಕರಿಸಿರುತ್ತಾರೆ.

 

 

LEAVE A REPLY

Please enter your comment!
Please enter your name here