ಕೊರಗಪ್ಪ ಮೂಡಾಯಿತೋಟ ಹೃದಯಾಘಾತದಿಂದ ನಿಧನ

0

 

ಬೆಳ್ಳಾರೆ ಗ್ರಾಮದ ಮೂಡಾಯಿತೋಟ ಕೊರಗಪ್ಪ ಎಂಬವರು ಹೃದಯಾಘಾತದಿಂದ ಇಂದು ಸಂಜೆ ನಿಧನರಾದರು.
ಅವರಿಗೆ 50 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕೂಲಿ ಕೆಲಸಕ್ಕೆ ಹೋಗಿದ್ದ ಇವರು ಸಂಜೆ ಮನೆಗೆ ಬಂದ ಬಳಿಕ ಎದೆನೋವು ಕಾಣಿಸಿಕೊಂಡಿತು.
ಕೂಡಲೇ ಇವರನ್ನು ಬೆಳ್ಳಾರೆ ಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು.
ಅಲ್ಲಿ ಪರೀಕ್ಷಿಸಿದ ವೈದ್ಯರು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದರೆನ್ನಲಾಗಿದೆ.
ಅಲ್ಲಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಯಿತು.
ಆದರೆ ಇವರು ಪುತ್ತೂರು ತಲುಪುವಾಗ ನಿಧನರಾದರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here