ಕೆದಿಲ ಗ್ರಾಮದ ಗಡಿಯಾರದಲ್ಲಿ ಇತ್ತಂಡದಿಂದ ಮಾತಿನಚಕಮಕಿ ಹಲ್ಲೆ – ಪೊಲೀಸರಿಂದ ಲಘು ಲಾಠಿ ಪ್ರಹಾರ

0

ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲು – ನಾಲ್ವರ ಬಂಧನ

ಪುತ್ತೂರು: ಕೆದಿಲ ಗ್ರಾಮದ ಗಡಿಯಾರದಲ್ಲಿ ಜ.17 ರ ತಡ ರಾತ್ರಿ ಅನ್ಯ ಧರ್ಮದ ಯುವಕರ ನಡುವೆ ಮಾತಿನ ಚಕಮಕಿ ಮತ್ತು ಪರಸ್ಪರ ಹಲ್ಲೆ ನಡೆದ ಹಾಗು ಪೊಲೀಸರು ಸ್ಥಳಕ್ಕೆ ಬಂದು ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಗಡಿಯಾರದ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಬಂಧಿತ ಆರೋಪಿಗಳು. ಅನ್ಯಧರ್ಮಿಗಳ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಾಗ ಸ್ಥಳಕ್ಕೆ ಪೊಲೀಸರು ಬಂದು ಗುಂಪು ಚದುರಿಸಿದ್ದರು. ಈ ವೇಳೆ ಪೊಲೀಸರೊಂದಿಗೂ ಮಾತಿನ ಚಕಮಕಿ ನಡೆದಿತ್ತಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿತ್ತೆನ್ನಲಾಗಿದೆ. ಪೊಲೀಸರು ಈ ವೇಳೆ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಅವರನ್ನು ಬಂಧಿಸಿ ಅವರ ವಿರುದ್ದ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here