ವಿಟ್ಲ:  ತೆಂಗಿನ ಮರದಿಂದ ಬಿದ್ದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು

0

ವಿಟ್ಲ: ತೆಂಗಿನ ಮರದಿಂದ ಬಿದ್ದ ಕೃಷಿ ಕಾರ್ಮಿಕರೊಬ್ಬರು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಕಾರ್ಮಿಕ ಪೆರಾಜೆ ನಡುಪಾಲು ನಿವಾಸಿ ಜನಾರ್ಧನ ನಾಯ್ಕ (48 ವ.) ಮೃತ ದುರ್ದೈವಿಯಾಗಿದ್ದಾರೆ. ನೆಟ್ಲಮುಡ್ನೂರು ಗ್ರಾಮದ ಗಣೇಶ ನಗರ ಸದಾಶಿವ ಭಟ್ ರವರ ತೋಟದಲ್ಲಿ ಜ.15ರಂದು ತೆಂಗಿನ ಕಾಯಿ ಕೀಳುತ್ತಿದ್ದ ಸಂದರ್ಭ 15ಅಡಿ ಎತ್ತರದಿಂದ ಆಕಸ್ಮಿಕವಾಗಿ ಬಿದ್ದಿದ್ದರು. ಘಟನೆಯಿಂದಾಗಿ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here