ಶ್ರೀ ದುರ್ಗಾಗಿರಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

0

 


ಉಪ್ಪಿನಂಗಡಿ: ಇಲ್ಲಿನ ದುರ್ಗಾಗಿರಿಯಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ದುರ್ಗಾ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಪ್ರವೇಶೋತ್ಸವ ಜ.೨೧ರಂದು ವೇ.ಮೂ. ಕರಾಯ ಹರಿಪ್ರಸಾದ್ ವೈಲಾಯರ ನೇತೃತ್ವದಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಇಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರದಿಂದ ಮೆರವಣಿಗೆಯ ಮೂಲಕ ಶ್ರೀ ಮಂದಿರಕ್ಕೆ ಹಸಿರುವಾಣಿಯನ್ನು ಸಮರ್ಪಿಸಲಾಯಿತು.

 


ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಮೆರವಣಿಗೆ ಉದ್ಘಾಟಿಸಿದರು. ಬಳಿಕ ಶ್ರೀ ಮಂದಿರದಲ್ಲಿ ಉಗ್ರಾಣ ಮುಹೂರ್ತ ನಡೆದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಿದರು. ಉದ್ಯಮಿ ಹೇರಂಭ ಶಾಸ್ತ್ರಿ ಕಾರ್ಯಾಲಯ ಉದ್ಘಾಟಿಸಿದರು.


ಬೆಳಗ್ಗೆಯಿಂದಲೇ ಶ್ರೀ ಮಂದಿರದಲ್ಲಿ ಧಾರ್ಮಿಕ ವಿಧಿ- ವಿಧಾನಗಳು ನಡೆದವು. ಈ ಸಂದರ್ಭ ಉದ್ಯಮಿ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಉಪ್ಪಿನಂಗಡಿ ಸಿಎ ಬ್ಯಾಂಕ್ ಮಾಜಿ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಯಂತ ಪೊರೋಳಿ, ಉಪ್ಪಿನಂಗಡಿ ಗ್ರಾ.ಪಂ. ಮಾಜಿ ಸದಸ್ಯ ರಮೇಶ ಭಂಡಾರಿ, ಕೈಲಾರ್ ರಾಜಗೋಪಾಲ ಭಟ್, ಭಜನಾ ಮಂದಿರದ ಗೌರವಾಧ್ಯಕ್ಷ ವೆಂಕಟ್ರಮಣ ಭಟ್ ಪಾತಾಳ, ಅಧ್ಯಕ್ಷ ಲೊಕೇಶ್ ಬೆತ್ತೋಡಿ, ಕಾರ್ಯದರ್ಶಿ ಪದ್ಮನಾಭ ಸಂಕೇಶ, ಕೋಶಾಧಿಕಾರಿ ವೆಂಕಟ್ರಮಣ ಭಟ್ ಮುಣಿಕ್ಕಾನ, ಉಪಾಧ್ಯಕ್ಷರುಗಳಾದ ಕೇಶವ ರಂಗಾಜೆ, ವಿಮಲ ಗೋಪಾಲ ಪಾತಾಳ, ಸಹ ಕಾರ್ಯದರ್ಶಿಗಳಾದ ಶೇಖರ ವರೆಕ್ಕ, ಮಾಲತಿ ಗಿರಿಯಪ್ಪ ಬೆತ್ತೋಡಿ, ಶ್ರೀ ದುರ್ಗಾ ಮಾತಾ ಭಜನಾ ಮಂಡಳಿ ಅಧ್ಯಕ್ಷೆ ಅರ್ಚನಾ ಸತೀಶ್ ಬೆತ್ತೋಡಿ, ಶ್ರೀ ದುರ್ಗಾ ಯುವಕ ಮಂಡಲದ ಅಧ್ಯಕ್ಷ ಪವನ್ ಪಾತಾಳ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here