- ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಹೇಮನಾಥ ಶೆಟ್ಟಿ
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಜ.21ರಂದು ನಡೆದಿದೆ. ಅಪಘಾತ ನಡೆದ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿಯವರು ಕೂಡಲೇ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಉಪಚರಿಸಿದರಲ್ಲದೆ ಗಾಯಾಳುಗಳನ್ನು ತನ್ನ ಕಾರಿನಲ್ಲಿ ಪುತ್ತೂರಿಗೆ ಕರೆ ತಂದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಮಡಿಕೇರಿ ನಾಪೋಕ್ಲು ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ.