ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರ

0

ಅರಿಯಡ್ಕ : ಸರ್ಕಾರಿ ಪ್ರೌಢಶಾಲೆ ಪಾಪೆಮಜಲು ಮತ್ತು ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ ಪಾಣಾಜೆ ಇದರ ಆಶ್ರಯದಲ್ಲಿ ಜ.೨೦ ರಂದು ಪಾಪೆಮಜಲು ಶಾಲಾ ಮಕ್ಕಳಿಗೆ ರೇಬಿಸ್ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಸ್ಥೆಯ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ ಅಧ್ಯಕ್ಷತೆ ವಹಿಸಿದ್ದರು. ಪಾಣಾಜೆ ಪಶು ವೈದ್ಯ ಸೇವಾ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಎಮ್. ದೀಪ ಬೆಳಗಿಸಿ ಉದ್ಘಾಟಿಸಿ ಮಾಹಿತಿ ನೀಡಿದರು. ಪಶು ವೈದ್ಯಾಧಿಕಾರಿ ಪುಷ್ಪಾರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೌಡಿಚ್ಚಾರು ಪಶುವೈದ್ಯ ಸೇವಾ ಇಲಾಖೆಯ ಹಿರಿಯ ಪಶುವೈದ್ಯ ಪರಿವೀಕ್ಷಕ ವೀರಪ್ಪ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ, ಶಿಕ್ಷಕಿಯರಾದ ಶಾಲೆಟ್ ಜೇನ್ ರೆಬೆಲ್ಲೊ, ಪೂರ್ಣಿಮಾ ಶೆಟ್ಟಿ, ಹರಿಣಾಕ್ಷಿ. ಕೆ, ಪವಿತ್ರ ಉಡುಪ, ಚಂದ್ರಲೇಖ, ಸಹಕರಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮೋನಪ್ಪ ಬಿ. ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಇಂದಿರಾ ಕೆ. ವಂದಿಸಿದರು. ಶಿಕ್ಷಕಿ ಸವಿತಾ ಪಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here