ಸಂಪಾಜೆ : ಪಯಸ್ವಿನಿ ಯುವಕ ಸಂಘದ  ವತಿಯಿಂದ ಕಾಲುಸೇತುವೆ ನಿರ್ಮಾಣ

0

ಕೆಲವು ತಿಂಗಳ ಹಿಂದ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿದ್ದು, ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿರುತ್ತದೆ.

 ಮನೆಯವರಿಗೆ ದಿ. ಎನ್.ಎಸ್.ದೇವಿಪ್ರಸಾದ್ ಇವರ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿದ್ದು ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ   ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು. ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ  ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು.

LEAVE A REPLY

Please enter your comment!
Please enter your name here