ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ; ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ:

0

ಅನ್ವಿತ್ ಎನ್
ಸಮರ್ಥರಾಮ ರೈ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಭಾರತ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯದಲ್ಲಿ ೨೯ನೇ ಮಕ್ಕಳ ವಿಜ್ಞಾನ ಸಮಾವೇಶವನ್ನು 10-17ರ ವಯೋಮಾನದ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಸಲ್ಲಿಸಿದ್ದ ಯೋಜನಾ ವರದಿಗಳ ಮೌಲ್ಯಮಾಪನವನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತಜ್ಞ ಮೌಲ್ಯಮಾಪಕರ ತಂಡ ಮಾಡಿರುತ್ತದೆ.

ಜನವರಿ ತಿಂಗಳಲ್ಲಿ ನಡೆದ 29ನೇ ರಾಜ್ಯಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ (N.C.S.C) ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 9 ತಂಡಗಳು ಭಾಗವಹಿಸಿದ್ದು, ಇದರಲ್ಲಿ ಸೀನಿಯರ್ ವಿಭಾಗದ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಸೀನಿಯರ್ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಅನ್ವಿತ್.ಎನ್ (ಮುಡೋಡಿ ನಿವಾಸಿ ಶ್ರೀಪತಿ.ಎನ್ ಮತ್ತು ವಿದ್ಯಾಲಕ್ಷ್ಮೀ.ಎ ಇವರ ಪುತ್ರ) ಹಾಗೂ ಸಮರ್ಥರಾಮ ರೈ (ಮೊದೆಲ್ಕಾಡಿ ಸತೀಶ್ ಕುಮಾರ್ ರೈ ಮತ್ತು ಪ್ರಗತಿ.ಎಸ್.ರೈ ಇವರ ಪುತ್ರ) ಇವರ ‘A herbal spray from weed, Wedelia trilobata: to repell household vegetable pests’, ಇವರು ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ವಿಜ್ಞಾನ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪ್ರಬಂಧಗಳನ್ನು ಮಂಡನೆ ಮಾಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here