ಪುತ್ತೂರು:ಶಾಲೆಗಾಗಿ ನಾವು ನೀವು ಯೋಜನೆಯ ಅಡಿಯಲ್ಲಿ, “ನಮ್ಮ ಶಾಲೆ ಪಾಲ್ತಾಡಿ” ಎಂಬ ಯೋಜನೆಯೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲ್ತಾಡಿ ಇಲ್ಲಿ ವಿಶೇಷ ಸಭೆ ನಡೆಸಲಾಯಿತು.
ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಕೃಷ್ಣಪ್ರಸಾದ್ರವರು ಮಾತನಾಡಿ, ಶಾಲೆಯ ಭೌತಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಮುತುವರ್ಜಿ ವಹಿಸಿ ಶಾಲೆಯನ್ನು ದತ್ತು ತೆಗೆದುಕೊಳ್ಳವುದಾಗಿ ಘೋಷಣೆ ಮಾಡಿದರು. ಶಾಲೆಯ ದತ್ತು ತೆಗೆದುಕೊಳ್ಳುವ ಪ್ರಕ್ರಿಯೆಗೆ ಬೇಕಾದ ಎಲ್ಲಾ ವಿಧಿ ವಿಧಾನಗಳ ಬಗ್ಗೆ ಹಾಗೂ ಶಾಲೆಯ ಅಭಿವೃದ್ಧಿಯನ್ನು ಹೇಗೆ ಮಾಡಬಹುದು ಎನ್ನುವುದರ ಕುರಿತು ಪುತ್ತೂರಿನ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ. ದಿನೇಶ್ ಕಾಮತ್ ಇವರು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು, ಉಲ್ಲಾಕುಳು ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳು,ಪೋಷಕರು, ಊರಿನ ವಿದ್ಯಾಭಿಮಾನಿಗಳು ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.