ಸೆ.18: ಕನಕಮಜಲು ಪ್ರಾ.ಕೃ‌ಪ.ಸ.ಸಂಘದ ಶತಮಾನೋತ್ಸವ ಪ್ರಯುಕ್ತ ತರಕಾರಿ ಕೃಷಿ ಮಾಹಿತಿ

0

 

ನವಚೇತನ ಯುವಕ ಮಂಡಲ ಹಾಗೂ ಸುದ್ದಿ ಕೃಷಿ ಮಾಹಿತಿ ಕೇಂದ್ರದ ಸಹಯೋಗ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಬೊಳುಬೈಲಿನ ನವಚೇತನ ಯುವಕ ಮಂಡಲ ಹಾಗೂ ಸುಳ್ಯ ಸುದ್ದಿ ಕೃಷಿ ಮಾಹಿತಿ ಕೇಂದ್ರದ ಜಂಟಿ ಆಶ್ರಯದಲ್ಲಿ ತರಕಾರಿ ಕೃಷಿ ಮಾಹಿತಿ ಕಾರ್ಯಕ್ರಮವು ಬೊಳುಬೈಲಿನ ನವಚೇತನ ಯುವಕ ಮಂಡಲದ ಸಭಾಭವನದಲ್ಲಿ ಸೆ.18ರಂದು ಬೆಳಿಗ್ಗೆ ಜರುಗಲಿದೆ.
ಕಾರ್ಯಕ್ರಮದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ನವಚೇತನ ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಉಪಸ್ಥಿತರಿರಲಿದ್ದಾರೆ. ತರಕಾರಿ ಕೃಷಿ ಕುರಿತು ಶಿವಪ್ರಸಾದ್ ವರ್ಮುಡಿ ಅವರು ಕೃಷಿಕರಿಗೆ ಮಾಹಿತಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರುಗಳು, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ನವಚೇತನ ಯುವಕ ಮಂಡಲದ ಪದಾಧಿಕಾರಿಗಳು, ಸಹಕಾರಿ ಸಂಘದ ಸಿಬ್ಬಂದಿಗಳು ಸೇರಿದಂತೆ ಕೃಷಿಕರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here