ಸಹನಾ ಕಾಂತಬೈಲುಗೆ ಗೌರಮ್ಮ ದತ್ತಿ ಪ್ರಶಸ್ತಿ ಪ್ರಕಟ

0

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಠಿತವಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ಬಾರಿ ಸಹನಾ ಕಾಂತಬೈಲು ರಚಿಸಿದ ‘ಇದು ಬರಿ ಮಣ್ಣಲ್ಲ’ ಲಲಿತ ಪ್ರಬಂಧಕ್ಕೆ ಲಭಿಸಿದೆ.

ಗೌರಮ್ಮರವರ ಪುತ್ರ ಬಿ.ಜಿ.ವಸಂತ ಅವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಇಲ್ಲಿಯವರೆಗೆ 16 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2021-22ನೇ ಸಾಲಿನ ಪ್ರಶಸ್ತಿಗಾಗಿ 12 ಲೇಖಕಿಯರು 16 ಕೃತಿಗಳನ್ನು ಪ್ರಸ್ತುತ ಪಡಿಸಿದ್ದರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here