ಪುತ್ತೂರು: ನಗರಸಭೆ ವ್ಯಾಪ್ತಿಯ ಪಡ್ನೂರು ಗ್ರಾಮದ ಮೂವಪ್ಪಿನಿಂದ ಗುರುಂಪುನಾರ್ ತನಕ ಹೋಗುವ ಸುಮಾರು 1 ಕಿ.ಮೀ ರಸ್ತೆ ನಿರ್ಮಾಣಕ್ಕೆ ಆ ಭಾಗದ ಜನರು ದಲಿತ್ ಸೇವಾ ಸಮಿತಿಯ ಮೂಲಕ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಉಪಸ್ಥಿತಿಯಲ್ಲಿ ಸಹಾಯಕ ಆಯುಕ್ತರಲ್ಲಿ ಬೆಳಿಗ್ಗೆ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಅವರು ಮಧ್ಯಾಹ್ನ ಗುರುಂಪುನಾರ್ಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಹಾಯಕ ಕಮೀಷನರ್ ಮನವಿಗೆ ಸ್ಪಂದಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದೆ.