ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನವನ್ನು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ, ಗ್ರಾ.ಪಂ. ಸದಸ್ಯರಾದ ವಿಠಲ ಗೌಡ ಅಗಳಿ, ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ನಿರ್ದೇಶಕ ಕರುಣಾಕರ ಪೂಜಾರಿ ಪಟ್ಟೆ ಮತ್ತೀತರರು ಉಪಸ್ಥಿತರಿದ್ದರು.