ಉಪ್ಪಿನಂಗಡಿ: ಗಂಡಿಬಾಗಿಲು ಖುತುಬಿಯ್ಯಾ ಜುಮಾ ಮಸೀದಿಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಸೀದಿ ಖತೀಬ್ ಅಬ್ದುಲ್ ಹಮೀದ್ ಶೌಕತ್ ಆಲಿ ಫೈಝಿ ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿ ಪ್ರಮಾಣವಚನ ಬೋಧಿಸಿದರು.
ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಆದಂ ಹಾಜಿ ಬಡ್ಡಮೆ, ಎಸ್.ಕೆ.ಎಸ್.ಎಸ್.ಎಫ್. ಅಧ್ಯಕ್ಷ ಜಿ. ಮಹಮ್ಮದ್ ರಫೀಕ್, ಜತೆ ಕಾರ್ಯದರ್ಶಿ ಅಬ್ದುಲ್ ರಜಾಕ್, ಯಂಗ್ಮೆನ್ಸ್ ಅಧ್ಯಕ್ಷ ಲತೀಫ್ ಮತ್ತಿತರರು ಉಪಸ್ಥಿತರಿದ್ದರು. ಮದ್ರಸ ಸದರ್ ಮುಅಲ್ಲಿಂ ಉಮೈರ್ ಮಿಸ್ಬಾಹಿ ಸ್ವಾಗತಿಸಿ, ವಂದಿಸಿದರು.