ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ

0

ಪುತ್ತೂರು:     ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಕೆ.ಅಬೂಬಕರ್ ಹಾಜಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಗಣರಾಜ್ಯೋತ್ಸವ ದಿನದ ಮಹತ್ವವನ್ನು ವಿವರಿಸಿದರು. ಶಿಕ್ಷಕಿಯರಾದ ಮನೋದ ಹಾಗೂ ಶ್ವೇತಾ ಮರಿಯಾ ಡಿಸೋಝ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು.

 

ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶೆಫೀನಾ, ಸದಸ್ಯರಾದ ಸಂಶುದ್ದೀನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಹಾಗೂ ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಸ್ವಾಗತಿಸಿ, ಶಿಕ್ಷಕಿ ತಪಸ್ವಿನಿ ವಂದಿಸಿದರು. ಶಿಕ್ಷಕ ಮುಹಮ್ಮದ್ ಅನೀಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕೇತರ ವೃಂದದವರಾದ ಖದೀಜತ್ ರಹಿಯಾನ, ಪ್ರತೀಕ್ಷಾ, ಇಬ್ರಾಹಿಂ ಬಡಗನ್ನೂರ್, ಶಿವಬಾಲನ್, ಅಶ್ರಫ್, ರಾಮ್ ಲಖನ್ ಸಹಕರಿಸಿದರು.

LEAVE A REPLY

Please enter your comment!
Please enter your name here