ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ನಗರದ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 73ನೇ ವರ್ಷದ ‘ಗಣರಾಜ್ಯೋತ್ಸವ ಆಚರಣೆ’ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಸಮಿತಿ ಅಧ್ಯಕ್ಷರಾದ  ಸುರೇಂದ್ರ ಕಿಣಿ ಧ್ವಜಾರೋಹಣ ನೆರವೇರಿಸಿ ‘ಗಣರಾಜ್ಯೋತ್ಸವ’ದ ಸಂದೇಶ ನೀಡಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಕುಮಾರ್ ಎಂ ಕೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕ ವಿಜಯನಾರಾಯಣ ಕೆ.ಎಂ, ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿ ಸದಸ್ಯೆ ಪ್ರಮೀತಾ ಸಿ ಹಾಸ್, ಪ್ರಾಂಶುಪಾಲರಾದ  ಅಕ್ಷತಾ ಎ.ಪಿ., ಕಾನೂನು ಪ್ರಾಧ್ಯಾಪಕರಾದ ಡಾ. ರೇಖಾ ಕೆ, ಕೌಶಿಕ್ ಸಿ, ಕು. ಶ್ರೀರಕ್ಷಾ, ಕು. ಶೀತಲ್, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಲಕ್ಷ್ಮಿಕಾಂತ ರೈ ಅನಿಕೂಟೇಲ್, ಕಂಪ್ಯೂಟರ್ ಉಪನ್ಯಾಸಕ ತಿಲಕ್, ಗ್ರಂಥಪಾಲಕಿ  ನಿರ್ಮಲಾ, ಆಫೀಸ್ ಸಿಬ್ಬಂದಿಗಳಾದ ಶ್ರೀಕೃಷ್ಣ ಭಟ್, ಹರೀಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಜ್ಞಾನೇಶ್ ಸ್ವಾಗತಿಸಿ, ವಿದ್ಯಾರ್ಥಿ ಕಾರ್ತಿಕ್ ವಂದಿಸಿದ್ದು, ಕಾರ್ಯಕ್ರಮವನ್ನು ಅಭಿಷೇಕ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here