ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲೆಯ ೧೧ ಕಡೆಗಳಲ್ಲಿ ಏಕಕಾಲಕ್ಕೆ ಬೃಹತ್ ರಕ್ತದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ಬ್ಲಾಕ್ ಗೆ ಸಂಬಂಧಿಸಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ೧೦೦ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗಿಯಾಗಿದ್ದರು.

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ನಗರಸಭಾ ಸದಸ್ಯರಾದ ಮಹಮ್ಮದ್ ರಿಯಾಜ್ ಕೆ, ಯೂಸುಫ್ ಡ್ರೀಮ್ಸ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜಿತ್ ಬಂಗೇರ ಕೆ, ಪುತ್ತೂರು ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಕೊಳ್ತಿಗೆ, ಪ್ರಧಾನ ಕಾರ್ಯದರ್ಶಿಗಳಾದ ಸನದ್ ಯೂಸುಫ್, ರಶೀದ್ ಮುರ, ಸಿದ್ದೀಕ್ ಸುಲ್ತಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಎಸ್ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕದ ಸದಸ್ಯ ಶರೀಫ್ ಬಲ್ನಾಡ್, ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಮುಖರಾದ ಶಕೀಲ್ ದರ್ಬೆ, ಸನತ್ ರೈ, ಯಂಗ್ ಬ್ರಿಗೇಡ್‌ನ ಪ್ರಮುಖರಾದ ಉನೈಸ್ ಗಡಿಯಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ವಿಟ್ಲ ಉಪ್ಪಿನಂಗಡಿ ಬ್ಲಾಕ್‌ನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಹಾಗು ರಕ್ತದಾನಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ವಿಟ್ಲ ನಗರ ಪಂಚಾಯತ್ ಸದಸ್ಯ ವಿ.ಕೆ.ಎಂ. ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಡೀಕಯ್ಯ ನಲ್ಕೆ, ಲತಾ ಅಶೋಕ್ ಪೂಜಾರಿ, ಪದ್ಮಿನಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಕರೀಂ ಕುದ್ದುಪದವು, ಶ್ರೀನಿವಾಸ ಶೆಟ್ಟಿ ಕೊಲ್ಯ, ಅಶೋಕ್ ಪೂಜಾರಿ, ಸಮೀರ್ ಪಳಿಕೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ವಿಟ್ಲ ಯುವ ಕಾಂಗ್ರೆಸ್ ಪ್ರಮುಖರಾದ ಶಿವಪ್ರಸಾದ್ ವಿಟ್ಲ, ಅಶ್ರಫ್ ಮೇಗಿನಪೇಟೆ, ರಾಜೇಶ್ ವಿಟ್ಲ, ಹನೀಫ್, ವಿನ್ಯಾಸ್ ವಿಟ್ಲ, ವಿಶಾಂಕ್ ಕುಮಾರ್ ಉಪಸ್ಥಿತರಿದ್ದರು.

ರಕ್ತದಾನ ಶಿಬಿರದ ಪ್ರಯುಕ್ತ ಆಯೋಜಿಸಲಾದ ರಕ್ತದಾನ ಮಾಡಿ ಸ್ಮಾರ್ಟ್ ಫೋನ್ ಗೆಲ್ಲಿರಿ.. ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್‌ನಲ್ಲಿ ನೌಫಲ್ ನೆಕ್ಕಿಲಾಡಿ ಮತ್ತು ವಿಟ್ಲ ಉಪ್ಪಿನಂಗಡಿ ಬ್ಲಾಕ್‌ನಲ್ಲಿ ಮೊಹಮ್ಮದ್ ಸಲೀಂ ವಿಜೇತರಾಗಿದ್ದಾರೆ.

LEAVE A REPLY

Please enter your comment!
Please enter your name here