ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಮುರುಳ್ಯ ಅಂಗನವಾಡಿ ಕೇಂದ್ರವನ್ನು ದತ್ತುತೆಗೆದುಕೊಂಡ ಬಿಜೆಪಿ ಮಹಿಳಾ ಮೋರ್ಚಾ

0

 

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ. 17ರಂದು ಆದರ್ಶ ಅಂಗನವಾಡಿ ಅಭಿಯಾನದಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಮುರುಳ್ಯ ಗ್ರಾಮದ ಶಾಂತಿನಗರ ಅಂಗನವಾಡಿಯನ್ನು ದತ್ತು ತೆಗೆದುಕೊಳ್ಳಲಾಯಿತು. ಪ್ರಧಾನಮಂತ್ರಿಯವರ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳು ಮತ್ತು ಪೋಷಕರಿಗೆ ಸಿಹಿ ತಿಂಡಿ ಹಂಚಲಾಯಿತು. ಇಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶುಭದ ಎಸ್ ರೈ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯೆ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪುಷ್ಪಾವತಿ ಬಾಳಿಲ, ಮಹಿಳಾ ಮೋರ್ಚಾ ಸದಸ್ಯೆ ಸುಧಾರಾಣಿ ಗ್ತಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಶಿಕ್ಷಕರು, ಸಹಾಯಕಿ, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here