ಬರೆಪ್ಪಾಡಿ- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಕೇಂದ್ರ ಉದ್ಘಾಟನೆ

0

ಕಾಣಿಯೂರು: ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಇದರ ಸಹಯೋಗದೊಂದಿಗೆ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನೆಯು ಜ ೩೧ರಂದು ನಡೆಯಿತು. ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಉದ್ಘಾಟಿಸಿ ಶುಭಹಾರೈಸಿದರು ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಸವಣೂರು ಒಕ್ಕೂಟಗಳ ವಲಯದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಗ್ರಾಮ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಸರಕಾರದ ದೊರಕುವ ಸೌಲಭ್ಯಗಳು ಸುಲಭ ರೀತಿಯಲ್ಲಿ ಸಿಗುವಂತಾಗಲು ಸೇವಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಮಾಹಿತಿ ನೀಡಿದರು. ವಲಯ ಮೇಲ್ವೀಚಾರಕ ರವಿ ಕಾರ್ಯಕ್ರಮ ನಿರೂಪಿಸಿದರು, ಸವಣೂರು ವಲಯದ ಸೇವಾಪ್ರತಿನಿಧಿಗಳಾದ ಚಿತ್ರೇಶ್, ಧನ್ಯ, ಬೃಂಧ, ಬೆಳಂದೂರು ಒಕ್ಕೂಟದ ಪರ್ದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here