ನೆಲ್ಯಾಡಿ: ಬಜತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜ.27ರಂದು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಬಿ.,ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ವಸತಿ ಯೋಜನೆ ಮಂಜೂರಾದ ಫಲಾನುಭವಿಗಳ ಬಗ್ಗೆ ತಿಳಿಸಲಾಯಿತು. ದಾರಿದೀಪ ದುರಸ್ತಿ ಬಗ್ಗೆ ಚರ್ಚಿಸಲಾಯಿತು. ಉಪಾಧ್ಯಕ್ಷೆ ಸ್ಮಿತಾ, ಸದಸ್ಯರಾದ ಗಂಗಾಧರ ಕೆ.ಎಸ್., ಅರ್ಪಿತ ರೈ, ವಿಮಲ, ರತ್ನ, ಪ್ರೆಸಿಲ್ಲಾ ಡಿ.ಸೋಜಾ, ಯಶೋದಾ, ಭಾಗೀರಥಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸ್ವಾಗತಿಸಿ, ಸರಕಾರದ ಯೋಜನೆಗಳ ಬಗ್ಗೆ ಸಭೆಗೆ ತಿಳಿಸಿದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು.