ಸವಣೂರು : ಇಲ್ಲಿನ ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವು ಫೆ.3 ಉದ್ಘಾಟನೆಗೊಳ್ಳಲಿದೆ. ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ದರ್ಮಕರ್ತರಾದ ಡಾ.ಜಿ.ಭೀಮೇಶ್ವರ ಜೋಶಿ ದೀಪ ಪ್ರಜ್ವಲಿಸಿ ಸಭಾಧ್ಯಕ್ಷತೆ ವಹಿಸುವರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸುವರು. ಉಡುಪಿಯ ಭಾರತೀಯ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಹೆಬ್ಬಾರ್ ಉಡುಪಿ, ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಕೆ ಮೊದಲಾದವರು ಪಾಲ್ಗೊಳ್ಳುವರು ಎಂದು ಮಾಯಾ ಮತ್ತು ಕೃಷ್ಣ ಕುಮಾರ್ ಅತ್ರಿಜಾಲು ತಿಳಿಸಿದ್ದಾರೆ.