ಎಡಮಂಗಲ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

0

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ನಿಂತಿಕಲ್ಲು ವಲಯದ ಎಡಮಂಗಲ ಪ್ರೌಡ ಶಾಲೆಯಲ್ಲಿ ಸೆ. 23ರಂದು ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾಹಿತಿ ಕಾರ್ಯಗಾರವನ್ನು ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳುರು ನಡೆಸಿಕೊಟ್ಟರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಶಿಕ್ಷಕ ಆನಂದ ಕೆ ಎಸ್ ನೆರವೇರಿಸಿ ಶುಭ ಹಾರೈಸಿದರು. ಮೇಲ್ವಿಚಾರಕಿ ಉಷಕಲ್ಯಾಣಿ ಸ್ವಾಗತಿಸಿ, ಸೇವಾಪ್ರತಿನಿಧಿ ರಾಮಣ್ಣ ವಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಲತಾ ಏರ್ಕ, ಶಶಿಕಲಾ ಹಾಗೂ ಒಕ್ಕೂಟದ ಪದಾಧಿಕಾರಿ ಹಾಗೂ ಸೇವಾಪ್ರತೀನಿಧಿ ಹವ್ಯ, ವಿಶಾಲಾಕ್ಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here