ಪುತ್ತೂರು: ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿರುವ ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಫೆ.7ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರು ಗಿರೀಶ್ ನಂದನ್ರವರಿಗೆ ಅಧಿಕಾರ ಹಸ್ತಾಂತರಿಸಿದರು. ಬಿ.ಎ, ಎಂಬಿಎ ಪದವಿಧರರಾಗಿರುವ ಗಿರೀಶ್ರವರು 2017ರ ಬ್ಯಾಚ್ನ ಕೆ.ಎ.ಎಸ್. ಅಧಿಕಾರಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯವರಾಗಿರುವ ಗಿರೀಶ್ ನಂದನ್ ಅವರು ಹಾಸನ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೆ ಇವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಕರ್ತವ್ಯಕ್ಕೆ ಹಾಜರಾದ ಬಳಿಕ ಗಿರೀಶ್ ನಂದನ್ ರವರು ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಯವರನ್ನು ಭೇಟಿಯಾದರು.