ಬೆಟ್ಟಂಪಾಡಿ: ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರ ಬಿಡುಗಡೆ

0

ಬೆಟ್ಟಂಪಾಡಿ: ಇಲ್ಲಿನ ಬಿಲ್ವಗಿರಿಯಲ್ಲಿ ಫೆ. 26 ರಂದು ನಡೆಯಲಿರುವ 37 ನೇ ವರ್ಷದ ಶ್ರೀ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಜ. 28 ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು. ಅರ್ಚಕ ವೇ.ಮೂ. ಸುಬ್ರಹಣ್ಯ ಭಟ್ ದೇವರ ಮುಂಭಾಗದಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ‌ ಮನಮೋಹನ್ ರೈ ಚೆಲ್ಯಡ್ಕ, ಬಯಲಾಟ ಸೇವಾ ಸಮಿತಿಯ ಅಧ್ಯಕ್ಷ ಡಾ. ಶ್ರೀಕೃಷ್ಣ ಭಟ್, ಕಾರ್ಯದರ್ಶಿ ಅರುಣ್ ಪ್ರಕಾಶ್ ರೈ ಮದಕ, ರಮೇಶ್ ಬಳ್ಳಿತ್ತಡ್ಡ, ನಾಗರಾಜ್ ಕಜೆ, ಪ್ರಭಾಕರ ರೈ ಬಾಜುವಳ್ಳಿ, ಪ್ರಮೋದ್ ಚೆಲ್ಯಡ್ಕ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here