ವಿಟ್ಲ: ವಿಟ್ಲ ಕಸಬಾ ಗ್ರಾಮದ ಕೋಡಿ ಖಾಸಗಿ ವ್ಯಕ್ತಿ ರಸ್ತೆಗೆ ಗೇಟು ಅಳವಡಿಸಿ ಸಂಚಾರಕ್ಕೆ ಅಡ್ಡಿ ಪಡಿಸುವ ಬಗ್ಗೆ ಸ್ಥಳೀಯಾಡಳಿತಕ್ಕೆ ದೂರು ನೀಡಿದರೂ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಫೆ.7ರಂದು ಬೆಳಗ್ಗಿನಿಂದ ವಿಟ್ಲ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ದ.ಕ. ಜಿಲ್ಲಾ ದಲಿತ್ ಸೇವೆ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡುರವರ ನೇತೃತ್ವದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಳಗ್ಗೆ ಆರಂಭಗೊಂಡ ಪ್ರತಿಭಟನೆ ಸಾಯಂಕಾಲವಾದರೂ ಕೊನೆಗೊಳ್ಳಲಿಲ್ಲ. ವಿಟ್ಲ ಠಾಣಾ ಪೊಲೀಸರು ಭಿಗಿ ಬಂದೋಭಸ್ತ್ ಏರ್ಪಡಿಸಿದ್ದಾರೆ.