ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೆಲ್ಯಾಡಿಯಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನೆಗೊಂಡಿತು.
ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಹಾರ್ಪಲ, ತಾಲೂಕಿನ ಯೋಜನಾಧಿಕಾರಿ ಮೇದಪ್ಪ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯ ಒಕ್ಕೂಟದ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್, ವಿಮಾ ಸಮನ್ವಯಾಧಿಕಾರಿ ಕವಿತಾ, ಹಣಕಾಸು ಪ್ರಬಂಧಕಿ ಸುಜಾತಾ, ವಲಯ ಮೇಲ್ವಿಚಾರಕ ವಿಜೇಶ್, ನೋಡೆಲ್ ಅಧಿಕಾರಿ ಚಿತ್ರೇಶ್, ಸೇವಾಪ್ರತಿನಿಧಿ ಕುಸುಮಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.