ನೆಲ್ಯಾಡಿ ಮಣ್ಣಗುಂಡಿ ನಿವಾಸಿ ಇಬ್ರಾಹಿಂ ನಾಪತ್ತೆ-ದೂರು

0

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹಿಂ(57೭ವ.)ರವರು ಫೆ.4ರಂದು ಮಸೀದಿಗೆ ಜುಮಾ ನಮಾಝ್‌ಗೆಂದು ಮನೆಯಿಂದ ಹೋದವರು ಮತ್ತೆ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವುದಾಗಿ ಅವರ ಪುತ್ರ ಅಬ್ದುಲ್ ರಶೀದ್‌ರವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.


ಫೆ.4ರಂದು ಮಧ್ಯಾಹ್ನ 12ಗಂಟೆ ವೇಳೆಗೆ ಶುಕ್ರವಾರದ ಪ್ರಾರ್ಥನೆಗಾಗಿ ಕೌಕ್ರಾಡಿ ಗ್ರಾಮದ ಹೊಸಮಜಲು ಮಸೀದಿಗೆಂದು ಮನೆಯಿಂದ ಹೋದವರು ವಾಪಸು ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅವರು ಮೊಬೈಲ್ ಫೋನ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಮನೆಯಿಂದ ಹೋಗುವ ವೇಳೆ ಆಕಾಶ ನೀಲಿ ಬಣ್ಣದ ಶರ್ಟ್ ಮತ್ತು ಕಡು ನೀಲಿ ಬಣ್ಣದ ಪಂಚೆ ಉಟ್ಟಿದ್ದರು. ಕನ್ನಡ, ಮಲಯಾಳಂ, ತುಳು, ಬ್ಯಾರಿ ಭಾಷೆ ಬಲ್ಲವರಾಗಿದ್ದಾರೆ ಎಂದು ಅಬ್ದುಲ್ ರಶೀದ್‌ರವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಮೊ: 9880360231, 7760832152 ಗೆ ತಿಳಿಸುವಂತೆಯೂ ಅಬ್ದುಲ್ ರಶೀದ್‌ರವರು ಕೋರಿದ್ದಾರೆ.

LEAVE A REPLY

Please enter your comment!
Please enter your name here