ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ನಾಗರಿಕರಿಗೆ ಧೈರ್ಯ ತುಂಬಿದ ಪೊಲೀಸರು – ಡಿವೈಎಸ್ಪಿ ನೇತೃತ್ವದಲ್ಲಿ ಪುತ್ತೂರು ಪೇಟೆಯಲ್ಲಿ ಪಥ ಸಂಚಲನ

0

ಪುತ್ತೂರು: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಪುತ್ತೂರು ಪೇಟೆಯಲ್ಲಿ ಫೆ.11ರಂದು ಪಥ ಸಂಚಲನ ನಡೆಸಿ ನಾಗರಿಕರಿಗೆ ಧೈರ್ಯ ತುಂಬಿದರು. ಪುತ್ತೂರು ದರ್ಬೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಯ ತನಕ ಪೊಲೀಸರು ಮತ್ತು ಕರ್ನಾಟಕ ರಾಜ್ಯ ಮೀಸಲು ಪಡೆಯ ಪಥ ಸಂಚಲನ ನಡೆಸಿದರು. ಡಿವೈಎಸ್ಪಿ ಡಾ. ಗಾನ ಪಿ ಕುಮಾರ್, ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಸುನಿಲ್, ಎಸ್.ಐ  ಗಳಾದ ರಾಜೇಶ್ ಕೆ.ವಿ, ನಸ್ರೀನಾ ತಾಜ್, ಸಂಚಾರ ಪೊಲಿಸ್ ಠಾಣೆಯ ಎಸ್.ಐ ರಾಮ ನಾಯ್ಕ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಪಥ ಸಂಚನಲದಲ್ಲಿ ಭಾಗವಹಿಸಿದ್ದರು.

 

LEAVE A REPLY

Please enter your comment!
Please enter your name here