ಕೆಮ್ಮಿಂಜೆ ದೇವಸ್ಥಾನದ ಬಳಿ ಸೈಕಲ್, ರಿಕ್ಷಾ ಅಪಘಾತ – ಸೈಕಲ್ ಸವಾರ ಮೃತ್ಯು

0

ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಸೈಕಲ್ ಸವಾರ ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬವರು ಮೃತಪಟ್ಟಿದ್ದಾರೆ.

ಚಿದಾನಂದ ಅವರು ಕೆಮ್ಮಿಂಜೆ ದೇವಸ್ಥಾನದ ಕಡೆ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here