ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಕಾರ್ಯಕ್ರಮ ಉದ್ಘಾಟನೆ

0

ಪುತ್ತೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭವು ಫೆ.12ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತ ಬಾಲವನದ ಬಯಲು ರಂಗಮಂದಿರದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮ ಉದ್ಘಾಟಿಸಿ, ಕಲ್ಪವೃಕ್ಷಕ್ಕೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ ಪಿ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಜಿಲ್ಲಾ ಕೋಶಾಧಿಕಾರಿ ಬಿ ಐತ್ತಪ್ಪ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ರಾಜೇಶ್ವರಿ ಸೋಮೇಶ್ವರ, ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಹರಿಣಿ ಪುತ್ತೂರಾಯ, ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಶೇಷಪ್ಪ ರೈ, ಗೌರವ ಕೋಶಾಧಿಕಾರಿ ಡಾ ಹರ್ಷಕುಮಾರ್ ರೈ ಮತ್ತು ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here